ಸೋಮವಾರ, ಏಪ್ರಿಲ್ 17, 2017

ಪ್ರಚಲಿತ ಘಟನೆಗಳು

*🌎 Daily Current Affairs Group 🌎*

*ಪ್ರಚಲಿತ ಘಟನಗಳು👇👇👇*

*✴️ಮಲಾಲ ಯೂಸಫಿ ವಿಶ್ವಸಂಸ್ಥೆಯ ಅತ್ಯಂತ ಕಿರಿಯ ಶಾಂತಿದೂತೆ*

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟಾನಿಯೊ ಗುಟ್ರೆಸ್ ಅವರು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲ ಯೂಸಫಿ ಅವರಿಗೆ ಅತ್ಯುನ್ನತ ಗೌರವವಾದ ವಿಶ್ವಸಂಸ್ಥೆಯ ಶಾಂತಿದೂತ ಪ್ರಶಸ್ತಿ ನೀಡಿ ಗೌರವಿಸಿದರು. ವಿಶ್ವದಲ್ಲಿ ಅತ್ಯಂತ ಮಹತ್ವದ ಎಲ್ಲರಿಗೂ ಶಿಕ್ಷಣ ಎಂಬ ಪರಿಕಲ್ಪನೆಯ ಸಂಕೇತ ಎಂದು ಯೂಸಫಿ ಅವರನ್ನು ಬಣ್ಣಿಸಿದರು

*✴️ಚಂಪಾರಣ್ಯ ಸತ್ಯಾಗ್ರಹಕ್ಕೆ 100 ವರ್ಷ*

‘ಸ್ವಚ್ಛಗೃಹ ಬಾಪು ಕೋ ಕಾರ್ಯಾಂಜಲಿ- ಏಕ್ ಅಭಿಯಾನ್ ಏಕ್ ಪ್ರದರ್ಶಿನಿ’ ಎಂಬ ಚಿತ್ರ ಪ್ರದರ್ಶನವನ್ನು ಪ್ರಧಾನಿ ನರೇಂದ್ರ ಮೋದಿ ಹೊಸದೆಹಲಿಯಲ್ಲಿ ಉದ್ಘಾಟಿಸಿದರು. ಚಂಪಾರಣ್ಯ ಸತ್ಯಾಗ್ರಹಕ್ಕೆ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಈ ವಿಶಿಷ್ಟ ಛಾಯಾಚಿತ್ರ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಈ ಪ್ರದರ್ಶನದಲ್ಲಿ ಚಂಪಾರಣ್ಯ ಸತ್ಯಾಗ್ರಹದ ವಿವಿಧ ಹಂತಗಳ ಛಾಯಾಚಿತ್ರಗಳ ಪ್ರದರ್ಶನ ಇರುತ್ತದೆ.

*✴️2017ನೇ ಸಾಲಿನ ಪುಲಿಟ್ಜರ್ ಪ್ರಶಸ್ತಿ ಪ್ರಕಟ...*

ಪತ್ರಿಕಾ ರಂಗದ ನೊಬೆಲ್ ಪ್ರಶಸ್ತಿ ಎಂದೇ ಖ್ಯಾತವಾಗಿರುವ 2017ನೇ ಸಾಲಿನ 101ನೇ ಸಾಲಿನ ಪುಲಿಟ್ಜರ್ ಪ್ರಶಸ್ತಿ ಪ್ರಕಟವಾಗಿದ್ದು, ಪುಲಿಟ್ಜರ್ ಪ್ರಶಸ್ತಿ ಸಮಿತಿಯ ನಿರ್ವಾಹಕ ಮೈಕ್ ಪ್ರೈಡ್ ಅವರು ಪ್ರಶಸ್ತಿ ಪಟ್ಟಿ ಪ್ರಕಟ ಮಾಡಿದರು. ನ್ಯೂಯಾರ್ಕ್ ನ  ಕೊಲಂಬಿಯಾ ವಿಶ್ವ ವಿದ್ಯಾಲಯದ ಆವರಣದಲ್ಲಿ ಪ್ರಶಸ್ತಿ ಘೋಷಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

*✴️ಕೇಂದ್ರದಿಂದ ಸೈಬರ್ ಫಿಸಿಕಲ್ ಸಿಸ್ಟಂ(ಸಿಪಿಎಸ್) ಯೋಜನೆಗೆ ಚಾಲನೆ..*

ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಸೈಬರ್ ಫಿಸಿಕಲ್ ಸಿಸ್ಟಂ(ಸಿಪಿಎಸ್) ಎಂಬ ಹೊಸ ಯೋಜನೆಯನ್ನು ಲೋಕಾರ್ಪಣೆ ಮಾಡಿದೆ. ಇಂಡಿಯನ್ ಇನ್ಸ್‍ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಗಳ ಸಹಕಾರದೊಂದಿಗೆ ಸ್ವಯಂಚಾಲಿತ ಕಾರು ಮತ್ತು ಮಾನವ ರಹಿತ ವಾಹನ/ವಿಮಾನ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವ ಯೋಜನೆ ಇದಾಗಿದೆ..

*✴️ದೀನದಯಾಳ್ ಅಂತ್ಯೋದಯ ರಸೋಯಿ ಯೋಜನೆಗೆ ಚಾಲನೆ*

ಮಧ್ಯಪ್ರದೇಶ ಸರ್ಕಾರವು ದೀನದಯಾಳ್ ಅಂತ್ಯೋದಯ ರಸೋಯಿ ಎಂಬ ವಿನೂತನ ಯೋಜನೆಗೆ ಚಾಲನೆ ನೀಡಿದೆ. ಇದು ಜನಪ್ರಿಯ ಸಬ್ಸಿಡಿ ಊಟದ ಯೋಜನೆಯಾಗಿದ್ದು, ರಾಜ್ಯದ ಎಲ್ಲ ಬಡವರಿಗೆ ಇದರ ಪ್ರಯೋಜನ ಲಭ್ಯವಾಗಲಿದೆ. ಈ ಯೋಜನೆಯನ್ನು ಬಿಜೆಪಿಯ ಸಂಸ್ಥಾಪಕ ನಾಯಕರಲ್ಲೊಬ್ಬರಾದ ದೀನದಯಾಳ್ ಉಪಾಧ್ಯಾಯ ಅವರ ಹೆಸರನ್ನು ಯೋಜನೆಗೆ ಇಡಲಾಗಿದೆ.

*✴️ಬಾಹ್ಯಾಕಾಶ ಸಂಶೋಧಕರಿಂದ ಕೆಪ್ಲರ್- 1649ಗೆ ಸುತ್ತುವ ಗ್ರಹ ಪತ್ತೆ..*

ನಾಸಾದ ಕೆಪ್ಲರ್ ಬಾಹ್ಯಾಕಾಶನೌಕೆಯ ಟೆಲೆಸ್ಕೋಪ್ ಬಳಸಿಕೊಂಡು, ಬಾಹ್ಯಾಕಾಶ ವಿಜ್ಞಾನಿಗಳು ಗುರು ಗ್ರಹದ ಮಾದರಿಯ ಹೊಸ ಗ್ರಹವೊಂದನ್ನು ಪತ್ತೆ ಮಾಡಿದ್ದಾರೆ. ತೀರಾ ಮಬ್ಬು ಬೆಳಕು ಹೊರಸೂಸುವ ಕೆಪ್ಲರ್- 1649 ಕಕ್ಷೆಯ ಸುತ್ತ ಇದು ಸುತ್ತುತ್ತಿದೆ. ಹೊಸದಾಗಿ ಪತ್ತೆಯಾದ ಈ ಗ್ರಹವು ಸೂರ್ಯನ ಪರಿಧಿಯ ಐದನೇ ಒಂದರಷ್ಟು ಗಾತ್ರದ್ದಾಗಿದ್ದು, ಭೂಮಿಯ ಗಾತ್ರಕ್ಕಿಂತ ಸ್ವಲ್ಪ ದೊಡ್ಡದು.

*✴️2017ನೇ ಸಾಲಿನ ಪುಲಿಟ್ಜರ್ ಪ್ರಶಸ್ತಿ ಪ್ರಕಟ...*

ಪತ್ರಿಕಾ ರಂಗದ ನೊಬೆಲ್ ಪ್ರಶಸ್ತಿ ಎಂದೇ ಖ್ಯಾತವಾಗಿರುವ 2017ನೇ ಸಾಲಿನ 101ನೇ ಸಾಲಿನ ಪುಲಿಟ್ಜರ್ ಪ್ರಶಸ್ತಿ ಪ್ರಕಟವಾಗಿದ್ದು, ಪುಲಿಟ್ಜರ್ ಪ್ರಶಸ್ತಿ ಸಮಿತಿಯ ನಿರ್ವಾಹಕ ಮೈಕ್ ಪ್ರೈಡ್ ಅವರು ಪ್ರಶಸ್ತಿ ಪಟ್ಟಿ ಪ್ರಕಟ ಮಾಡಿದರು. ನ್ಯೂಯಾರ್ಕ್ ನ  ಕೊಲಂಬಿಯಾ ವಿಶ್ವ ವಿದ್ಯಾಲಯದ ಆವರಣದಲ್ಲಿ ಪ್ರಶಸ್ತಿ ಘೋಷಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

*✴️2016ನೇ ವರ್ಷದ ಕರ್ನಾಟಕ ಚಲನ ಚಿತ್ರ ವಾರ್ಷಿಕ ಪ್ರಶಸ್ತಿಗಳು ಘೋಷಣೆ..*

2016ನೇ ವರ್ಷದ ಕರ್ನಾಟಕ ಚಲನ ಚಿತ್ರ ವಾರ್ಷಿಕ ಪ್ರಶಸ್ತಿಗಳು ಘೋಷಣೆ ಯಾಗಿವೆ. ಪೌರ ಕಾರ್ಮಿಕನೊಬ್ಬನ  ಜೀವನದ ಕಥಾವಸ್ತುವಿರುವ ಬಿ.ಎಂ.ಗಿರಿರಾಜ್ ನಿರ್ದೇಶನದ ‘ಅಮರಾವತಿ’ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ.  ಇದೇ ಚಿತ್ರದ ನಟನೆಗಾಗಿ ಅಚ್ಯುತ್ ಕುಮಾರ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದಿದ್ದಾರೆ. ಬ್ಯೂಟಿಫುಲ್ ಚಿತ್ರದ ನಟನೆಗಾಗಿ ಶ್ರುತಿ ಹರಿಹರನ್‍ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ.

ಮೊದಲನೆ ಅತ್ಯುತ್ತಮ ಚಿತ್ರ : ಅಮರಾವತಿ (ನಿರ್ದೇಶಕ: ಬಿ.ಎಂ. ಗಿರಿರಾಜ್)
ಎರಡನೇ ಅತ್ಯುತ್ತಮ ಚಿತ್ರ : ರೈಲ್ವೇ ಚಿಲ್ಡ್ರನ್
ಮೂರನೇ ಅತ್ಯುತ್ತಮ ಚಿತ್ರ : ಅಂತರ್ಜಲ
ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ : ಮೂಡ್ಲ ಸೀಮೆಯಲಿ
ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ : ಕಿರಿಕ್ ಪಾರ್ಟಿ
ಅತ್ಯುತ್ತಮ ಮಕ್ಕಳ ಚಿತ್ರ : ಜೀರ್ ಜಿಂಬೆ
ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಭಾಷಾ ಚಿತ್ರ : ಮದಿಪು (ತುಳು ಭಾಷೆ)

ಪ್ರಶಸ್ತಿ ವಿಜೇತರ ಪಟ್ಟಿ
ಅತ್ಯುತ್ತಮ ನಟ – ಅಚ್ಯುತ್ ಕುಮಾರ್ – ಅಮರಾವತಿ
ಅತ್ಯುತ್ತಮ ನಟಿ – ಶ್ರುತಿ ಹರಿಹರನ್‍  -ಬ್ಯೂಟಿಪುಲ್ ಮನಸುಗಳು
ಅತ್ಯುತ್ತಮ ಪೋಷಕ ನಟ – ನವೀನ್ ಡಿ ಪಡೀಲ್ -ಕುಡ್ಲ ಕೆಫೆ (ತುಳು)
ಅತ್ಯುತ್ತಮ ಪೋಷಕ ನಟಿ – ಅಕ್ಷತಾ ಪಾಂಡವಪುರ (ಪಲ್ಲಟ)
ಅತ್ಯುತ್ತಮ ಕತೆ – ನಂದಿತಾ ಯಾದವ್
ಅತ್ಯುತ್ತಮ ಚಿತ್ರಕತೆ – ಅರವಿಂದ ಶಾಸ್ತ್ರಿ (ಚಿತ್ರ -ಕಹಿ)

ಅತ್ಯುತ್ತಮ ಸಂಭಾಷಣೆ – ಬಿ.ಎಂ.ಗಿರಿರಾಜ್ (ಚಿತ್ರ: ಅಮರಾವತಿ)

ಅತ್ಯುತ್ತಮ ಛಾಯಾಗ್ರಹಣ –ಶೇಖರ್ ಚಂದ್ರ -(ಚಿತ್ರ: ಮುಂಗಾರು ಮಳೆ-2)
ಅತ್ಯುತ್ತಮ ಸಂಗೀತ ನಿರ್ದೇಶನ ಎಂ.ಆರ್.ಚರಣ್ ರಾಜ್ – (ಚಿತ್ರ: ಜೀರ್ ಜಿಂಬೆ)
ಅತ್ಯುತ್ತಮ ಸಂಕಲನ ಸಿ.ರವಿಚಂದ್ರನ್ – (ಚಿತ್ರ: ಮಮ್ಮಿ)
ಅತ್ಯುತ್ತಮ ಬಾಲ ನಟ -ಮಾಸ್ಟರ್ ಮನೋಹರ್ ಕೆ. -(ಚಿತ್ರ: ರೈಲ್ವೇ ಚಿಲ್ಡ್ರನ್)
ಅತ್ಯುತ್ತಮ ಬಾಲ ನಟಿ- ಬೇಬಿ ಸಿರಿವಾನಳ್ಳಿ (ಚಿತ್ರ: ಜೀರ್ ಜಿಂಬೆ)
ಅತ್ಯುತ್ತಮ ಕಲಾ ನಿರ್ದೇಶನ – ಶಶಿಧರ ಅಡಪ (ಚಿತ್ರ: ಉಪ್ಪಿನ ಕಾಗದ)
ಅತ್ಯುತ್ತಮ ಗೀತ ರಚನೆ -ಕಾರ್ತಿಕ್ ಸರಗೂರು (ಚಿತ್ರ: ಜೀರ್ ಜಿಂಬೆ)
ಅತ್ಯುತ್ತಮ ಹಿನ್ನೆಲೆ ಗಾಯಕ -ವಿಜಯ್ ಪ್ರಕಾಶ್ (ಚಿತ್ರ: ಬ್ಯೂಟಿಪುಲ್ ಮನಸುಗಳು)
ಅತ್ಯುತ್ತಮ ಹಿನ್ನೆಲೆ ಗಾಯಕಿ –  ಸಂಗೀತಾ ರವೀಂದ್ರನಾಥ್ (ಚಿತ್ರ: ಜಲ್ಸ)

ತೀರ್ಪುಗಾರರ ವಿಶೇಷ ಪ್ರಶಸ್ತಿ -ಚಿನ್ಮಯ್ -(ಚಿತ್ರ: ಸಂತೆಯಲ್ಲಿ ನಿಂತ ಕಬೀರ)
ಅತ್ಯುತ್ತಮ ನಿರ್ಮಾಣ ನಿರ್ವಾಹಕ – ಕೆ.ವಿ.ಮಂಜಯ್ಯ -(ಚಿತ್ರ: ಮುಂಗಾರು ಮಳೆ-2).

💐💐💐💐💐💐💐💐💐💐💐
   

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ