ಬುಧವಾರ, ಜನವರಿ 30, 2019

ವಿಶ್ವ ಮಕ್ಕಳ ದಿನಾಚರಣೆ

ವಿಶ್ವ ಮಕ್ಕಳ ದಿನಾಚರಣೆ


20 ನೆ ನವಂಬರ್ ವಿಶ್ವ ಮಕ್ಕಳ ದಿನಾಚರಣೆ . 14 ನೆ ನವಂಬರ್ ಭಾರತದಲ್ಲಿ ಮಕ್ಕಳ ದಿನಾಚರಣೆ


ಪ್ರಪಂಚದಲ್ಲಿ ನವೆಂಬರ್  20 ರಂದು ಮಕ್ಕಳ ದಿನಾಚರಣೆಯನ್ನು ಪ್ರತಿವರ್ಷ ಆಚರಿಸುವರು. ಈ ದಿನವನ್ನು ಮಕ್ಕಳ ಬಾಲ್ಯವನ್ನು ಸಂಭ್ರಮದಿಂದ ಕಾಣಲು ಆಚರಿಸಲಾಗುವುದು. ಈ ದಿನವನ್ನು  ಬಾಲ್ಯದ ಹೆಸರಿನಲ್ಲಿ ಆಚರಿಸಲಾಗುವುದು.
ಮಕ್ಕಳ ದಿನವನ್ನು 1959 ಕ್ಕೆ ಮೊದಲು ಜಗತ್ತಿನಾದ್ಯಂತ ಅಕ್ಟೋಬರ್ ತಿಂಗಳಲ್ಲಿ  ಆಚರಿಸುತ್ತಿದ್ದರು. ಈ ದಿನ ವನ್ನು ವಿಶ್ವ ಸಂಸ್ಥೆಯ ಸಾಮಾನ್ಯಸಭೆಯು ತೀರ್ಮಾನಿಸಿದಂತೆ ಪ್ರಥಮ ಬಾರಿಗೆ   1954 ರಲ್ಲಿ ಆಚರಿಸಲಾಯಿತು. ಇದನ್ನು ಮೂಲಭೂತ ಉದ್ಧೇಶ ಸಮುದಾಯದ ವಿನಿಮಯದ  ಹೆಚ್ಚಳ ಮತ್ತು ಮಕ್ಕಳ ತಿಳುವಳಿಕೆ ಜಾಸ್ತಿ ಮಾಡುವುದು,  ಅಲ್ಲದೆ ಮಕ್ಕಳಿಗೆ ಅನುಕೂಲವಾದ ಕಲ್ಯಾಣ ಕಾರ್ಯಕ್ರಮಗಳನ್ನು ಉತ್ತೇಜಿಸಲು  ಜಗತ್ತಿನಾದ್ಯಂತ  ಆಚರಣೆಯನ್ನು ಪ್ರಾರಂಭಿಸಲಾಯಿತು.

ನವೆಂಬರ್  20ನ್ನು ವಿಶ್ವ ಮಕ್ಕಳ ದಿನವಾಗಿ ಆರಿಸಲು ಕಾರಣ, ಅದು  ವಿಶ್ವ ಸಂಸ್ಥೆಯು ಸಾಮಾನ್ಯ ಸಭೆಯು ಮಕ್ಕಳ ಹಕ್ಕುಗಳ ಘೋಷಣೆಯನ್ನು 1959ರಲ್ಲಿ, ಅಂಗೀಕರಿಸಿದ ದಿನ.  ಮಕ್ಕಳ ಹಕ್ಕುಗಳ ಸಮಾವೇಶವು
1989 ರಲ್ಲಿ  ಅದಕ್ಕೆ ಸಹಿ ಮಾಡಿತು. ಆಗಿನಿಂದ  191 ದೇಶಗಳು  ಇದನ್ನು ಒಪ್ಪಿವೆ.

ಮಕ್ಕಳದಿನಾಚರಣೆಯನ್ನು ವಿಶ್ವಾದ್ಯಂತ  1953, ಅಕ್ಟೋಬರನಲ್ಲಿ ಆಚರಿಸಲಾಯಿತು. ಇದನ್ನು ಜಿನೆವಾದಲ್ಲಿನ ಅಂತರಾಷ್ಟ್ರೀಯ ಮಕ್ಕಳ ಕಲ್ಯಾಣ  ಸಮಿತಿಯು ಪ್ರಾಯೋಜಿಸಿತು.  ಅಂತರಾಷ್ಟ್ರೀಯ ಮಕ್ಕಳ ದಿನದ ಯೋಜನೆಯು ಶ್ರೀ. ಕೃಷ್ಣ ಮೆನೆನ್ ಅವರಿಂದ ಸೂಚಿಸಿದರು. 1954 ರಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯು ಅದನ್ನು ಅನುಮೋದಿಸಿತು. ನವಂಬರ್ 20 ವಿಶ್ವ ಮಕ್ಕಳ ದಿನ. ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು 1954 ರಲ್ಲಿ ಮಕ್ಕಳ ದಿನಾಚರಣೆ ಮಾಡಲು ಘೋಷಣೆ ಮಾಡಿತು. ಪ್ರಪಂಚದ ಎಲ್ಲ ರಾಷ್ಟ್ರಗಳು ಅದನ್ನು ಆಚರಿಸಲು  ಪ್ರೋತ್ಸಾಹಿಸಿತು. ಮಕ್ಕಳಲ್ಲಿ ಪರಸ್ಪರ ವಿನಮಯ ಮತ್ತು ಅರಿವು ಹೆಚ್ಚಿಸಲು,  ಮತ್ತು ಮಕ್ಕಳ ಕಲ್ಯಾಣ ಕಾರ್ಯ ಕ್ರಮಗಳನ್ನು ಕೈಗೆತ್ತಿಕೊಳ್ಳಲು ಜಗತ್ತಿನಾದ್ಯಂತ ಕ್ರಮ ತೆಗೆದುಕೊಳ್ಳಲು  ಸಾಧ್ಯವಾಯಿತು.
ಈಗಾಗಲೇ ತೀಳಿಸಿರುವಂತೆ ಭಾರತದಲ್ಲಿ ಮಕ್ಕಳ ದಿನಾಚರಣೆಯನ್ನು ಜವಹರಲಾಲ್ ನೆಹರು ಅವರ ಜನ್ಮದಿನವಾದ ನವಂಬರ ೧೪ ರಂದು ಆಚರಿಸಲಾಗುವುದು. ಅಂದು ಮಕ್ಕಳಿಗೆ ಖಷಿಯಿಂದ ಕುಣಿಯುವ ದಿನ, ಬಾಲ್ಯದ ಸೊಗಸು, ಬೆಡಗು , ಬೆರಗು ಮತ್ತು ನೆಹರು ಅವರ ಮಕ್ಕಳ ಮೇಲಿನ ಅಪಾರ ಅಕ್ಕರೆ ಪ್ರೀತಿಯನ್ನು ಸಂಭ್ರಮದಿಂದ ನೆನೆವ ದಿನ. ಭಾರತದಾದ್ಯಂತ “ಮಕ್ಕಳದಿನಾಚರಣೆ “ಯನ್ನು ಬಹು ಸಡಗರ ಮತ್ತು ಸಂಭ್ರಮದಿಂದ ಆಚರಿಸುವರು.
ಮಕ್ಕಳ ದಿನವನ್ನು  ಅವರಿಗೆ ಜೀವನದ ಸುಖವನ್ನು ಸವಿಯುವ ಹಕ್ಕನ್ನು ಹೊಂದಲು,  ದೇಶದ ಆರೋಗ್ಯವಂತ ಮತ್ತು ಪ್ರಜ್ಞಾವಂತ ನಾಗರೀಕರಾಗಿ ಬೆಳೆಯಲು ಅವಕಾಶ ನೀಡುವುದಕ್ಕಾಗಿ. ಆಚರಿಸಲಾಗುವುದು.  ನಿಮ್ಮ ಮಕ್ಕಳಿಗೆ ಅದೃಷ್ಟವಶದಿಂದ  ತನ್ನಲ್ಲಿರುವುದನ್ನು  ಇಲ್ಲದೆ ಇರುವ ಇತರರೊಂದಿಗೆ ಹಂಚಿಕೊಳ್ಳುವುದರ ಮೌಲ್ಯವನ್ನು ತಿಳಿಸಿದರೆ, ಮಗುವು ಹೊಣೆಯರಿತ ಮಾನವನಾಗಿ ಬೆಳೆಯಲು ಅನುವಾಗುವುದು. ಇದರ ಜೊತೆ ಇನ್ನೊಂದು ಮಗುವು ನಿರ್ಲಕ್ಷತೆಯಿಂದ ಬಾಲಾಪರಾಧಿಯಾಗುವುದನ್ನೂ ತಪ್ಪಿಸಿದಂತಾಗುವುದು.ಇದಕ್ಕೆ ಕಾರಣ ನಿಮ್ಮ ಮುಂದಾಲೋಚನೆ ಎಂಬ ತೃಪ್ತಿಯಾಗುವುದು

ಮೂಲ: ಪೋರ್ಟಲ್ ತಂಡ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ